Monday, June 30, 2025
spot_imgspot_img
spot_imgspot_img

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ ; ಆಘಾತಕ್ಕೆ ಒಳಗಾದ ಬಡ ಕುಟುಂಬ

- Advertisement -
- Advertisement -

ಮಂಗಳೂರು: ಇಲ್ಲಿನ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಇಂದಿರಾ ಎಂಬವರಿಗೆ ಸೇರಿದ ಮನೆ ಹೊತ್ತಿ ಉರಿದಿದೆ. ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಮನೆಯೊಳಗಿನ ವಸ್ತುಗಳೆಲ್ಲಾ ಹೊತ್ತಿ ಉರಿದಿದೆ. ವಾಸದ ಮನೆ ಹೊತ್ತಿಯುರಿದ ಘಟನೆಯಿಂದ ಆಘಾತಕ್ಕೆ ಒಳಗಾಗಿರುವ ಬಡ ಕುಟುಂಬ ಕಂಗಾಲಾಗಿದೆ.

- Advertisement -

Related news

error: Content is protected !!