- Advertisement -
- Advertisement -
ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಹತ್ಯೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಅವರ ಮೃತದೇಹ ರವಿವಾರ ಬೆಳಗ್ಗೆ 10:30ರ ಸುಮಾರಿಗೆ ಮನೆ ತಲುಪಿದೆ.
ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿಸಿದ ಬಳಿಕ ಆಯಂಬುಲೆನ್ಸ್ ಮೂಲಕ ಮೃತದೇಹವನ್ನು ಜಲೀಲ್ ಅವರ ಮನೆಗೆ ಕರೆತರಲಾಯಿತು. ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಅಂತಿಮ ವಿಧಿವಿಧಾನದ ಬಳಿಕ ಮೃತರು ಅಂತ್ಯ ಸಂಸ್ಕಾರವನ್ನು ಕೂಳೂರು ಪಂಜಿಮೊಗರಿನ ಜುಮಾ ಮಸೀದಿ ವಠಾರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತೆ ನೋಡಿಕೊಳ್ಳುತ್ತಿದ್ದಾರೆ. ಸುರತ್ಕಲ್ ನಿಂದ ಕಾಟಿಪಳ್ಳಕ್ಕೆ ಯಾವುದೇ ಅನ್ಯ ವಾಹನಗಳು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.
- Advertisement -