- Advertisement -
- Advertisement -
ಮಂಗಳೂರು : ಮನೆಯಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಕಲ್ಲು ಎಸೆದು ಹಾನಿಗೊಳಿಸಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಲಿಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದ್ದು, ಜಲ್ಲಿಕ್ರಾಸ್ ನಿವಾಸಿ ಅಬ್ಬಾಸ್ ಅವರ ಮನೆಯಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಓಮ್ನಿ ಹಾಗೂ ಕ್ವಾಲಿಸ್ ಕಾರುಗಳ ಗಾಜುಗಳಿಗೆ ದುಷ್ಕರ್ಮಿಗಳು ಕಲ್ಲು ಎಸೆದು ಹಾನಿ ಮಾಡಿದ್ದಾರೆ. ಈ ಸಂದರ್ಭ ಮನೆಯ ಕಿಟಕಿಯ ಗಾಜು ಕೂಡ ಹಾನಿಯಾಗಿದೆ. ಸ್ಥಳಕ್ಕಾಗಮಿಸಿದ ಕೊಣಾಜೆ ಠಾಣಾ ಪೊಲೀಸರಿಂದ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -