- Advertisement -
- Advertisement -
ಮಂಗಳೂರು: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿರುವ ದರ್ಗಾದ ನವೀಕರಣ ಕಾಮಗಾರಿಗೆ ನ್ಯಾಯಾಲಯ ತಡೆ ನೀಡಿದೆ. ದೇವಸ್ಥಾನದ ಮಾದರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಸೀದಿ ನವೀಕರಣ ಕಾಮಗಾರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನ್ಯಾಯಾಲಯದ ತಡೆಯಾಜ್ಞೆ ತಂದಿವೆ.
ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದ್ದು, ಯಾವುದೇ ಮಾದರಿಯನ್ನು ಕಿತ್ತು ಹಾಕುವುದು ಅಥವಾ ಹಾನಿ ಮಾಡದಂತೆ ತಡೆಯಾಜ್ಞೆ ವಿಧಿಸಲಾಗಿದೆ.
ಅಲ್ಲದೇ ಯಥಾಸ್ಥಿತಿ ಕಾಪಾಡಲು ಸೂಚಿಸಿ ಕೋರ್ಟ್ ತಡೆ ನೀಡಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿನ ದರ್ಗಾದ ನವೀಕರಣ ಕಾಮಗಾರಿ ವೇಳೆ ನಿನ್ನೆ ದೇವಾಲಯದ ಮಾದರಿ ಪತ್ತೆಯಾಗಿದೆ.
- Advertisement -