- Advertisement -
- Advertisement -
ಮಂಗಳೂರು: ಬೆಳ್ಳಂಬೆಳಗ್ಗೆಯೇ ಯವರೂಪದಲ್ಲಿ ಬಂದ ಲಾರಿಯೊಂದು ವ್ಯಕ್ತಿಯೋರ್ವ ಜೀವ ಕಸಿದುಕೊಂಡ ಘಟನೆ ನಡೆದಿದೆ. ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಈ ಘಟನೆ ನಡೆದಿದೆ.
ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ವ್ಯಕ್ತಿಯೊಬ್ಬರು ತನ್ನ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಗೆ ಗಂಭೀರ ಗಾಯವಾಗಿದೆ.
ತಕ್ಷಣ ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -