Saturday, April 20, 2024
spot_imgspot_img
spot_imgspot_img

ಮಂಗಳೂರು: ಮುಂಬೈನ ಚರಂಡಿಯಲ್ಲಿ ಉಳ್ಳಾಲದ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

- Advertisement -G L Acharya panikkar
- Advertisement -
vtv vitla

ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ

ಕೊಳೆತ ಮೃತದೇಹದ ಜೇಬಿನಲ್ಲಿ ಚುನಾವಣಾ ಗುರುತಿನ ಚೀಟಿ ಸಿಕ್ಕಿದ್ದು , ಇದರ ಆಧಾರದಲ್ಲಿ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಂದರ ಎಂಬುವರ ಪುತ್ರ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ.

ಅವರು ಆ.14ರಂದು ಕಾಣೆಯಾಗಿದ್ದು , ಈ ಬಗ್ಗೆ ಮುಂಬೈಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಮೃತದೇಹ ವಸಾ ಪೊಲೀಸ್ ಠಾಣಾ ವ್ಯಾಪ್ತಿಯ ಬೃಹತ್ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಗೆ ಜೀವ ಬೆದರಿಕೆ ಇತ್ತು ಎಂದು ಸ್ನೇಹಿತರಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೊಂದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಧೀರ್ ಕುಮಾರ್ ಸಣ್ಣ ಪ್ರಾಯದಲ್ಲೇ ಮುಂಬೈಗೆ ಹೋಗಿದ್ದರಿಂದ ಸ್ಥಳೀಯರಲ್ಲಿ ಹೆಚ್ಚಿನ ಮಾಹಿತಿ ಇಲ್ಲ.

- Advertisement -

Related news

error: Content is protected !!