- Advertisement -
- Advertisement -
ಮಂಗಳೂರು: ಸುಳ್ಯದಿಂದ ಮಂಗಳೂರಿಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುತ್ತಿದ್ದ ಯುವತಿಯೊಬ್ಬರಿಗೆ ಪಕ್ಕದಲ್ಲಿ ಕುಳಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.
ಸುಳ್ಯದಿಂದ ಮಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿ ಬರುತ್ತಿದ್ದ ವೇಳೆ ಆರೋಪಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ವಾಜಿದ್ ಎ ಜಮಖಾನಿ ಹಾವೇರಿ ಜಿಲ್ಲೆ ಎಂದು ಗುರುತಿಸಲಾಗಿದೆ.
ನೊಂದ ಯುವತಿ ಆರೋಪಿಯ ವಿರುದ್ಧ ಮಾನಹಾನಿ ಮಾಡಿ ಕಿರುಕುಳ ನೀಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ .ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- Advertisement -