Sunday, April 28, 2024
spot_imgspot_img
spot_imgspot_img

ಮಂಗಳೂರು: ಮೇ 3ರಂದು ಕರಾವಳಿಗೆ ನಮೋ ಎಂಟ್ರಿ..! ಬಿಜೆಪಿಗೆ ಗಜ ಬಲ ತುಂಬಲು ಸಕಲ ಪ್ರಯತ್ನ

- Advertisement -G L Acharya panikkar
- Advertisement -

ಮಂಗಳೂರು: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂಲ್ಕಿಯಲ್ಲಿ ಮೋದಿ ಅವರ ಕಾರ್ಯಕ್ರಮ ಏರ್ಪಡಿಸಿದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳೆರಡರ ಕಾರ್ಯಕರ್ತರಿಗೆ ಅನುಕೂಲವಾಗಲಿದೆ. ಹಾಗಾಗಿ ಈ ಸ್ಥಳವನ್ನು ಆಯ್ಕೆ ಮಾಡಲಾಗಿದೆ’ ಎಂದರು.

‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ಕೋಟ ತಿಳಿಸಿದರು.

- Advertisement -

Related news

error: Content is protected !!