Saturday, June 28, 2025
spot_imgspot_img
spot_imgspot_img

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ತೆರಳಿದ ವ್ಯಕ್ತಿ ನಾಪತ್ತೆ ಪ್ರಕರಣ ಸುಖಾಂತ್ಯ; ನಾಲ್ಕು ದಿನಗಳ ನಂತರ ಪತ್ತೆ

- Advertisement -
- Advertisement -

ಮಂಗಳೂರು: ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿ ನಾಲ್ಕು ದಿನದ ಬಳಿಕ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ನಡೆದಿದೆ.

ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆ.2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದರು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಸೆ.5ರಂದು ಬೆಳ್ಳಾರೆಯಲ್ಲಿ ಪತ್ತೆಯಾಗಿದ್ದು ಠಾಣೆಗೆ ಹಾಜರಾಗಿ ಬಳಿಕ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ ಕಲ್ಲಗದ್ದೆ , ಸಿಬ್ಬಂದಿ ಕುಮಾರ ಕಟ್ಟತ್ತಾರು, ಪ್ರಜ್ವಲ್ ರವರೊಂದಿಗೆ ಮನೆಗೆ ತೆರಳಿದ್ದಾರೆಂದು ತಿಳಿದು ಬಂದಿದೆ. ಮಂಗಳೂರಿನಿಂದ ತನ್ನ ಸ್ನೇಹಿತನ ಮನೆಗೆ ಹೋಗಿರುವುದಾಗಿ ತಿಳಿಸಿದ್ದಾರೆನ್ನಲಾಗಿದೆ. ಈ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.

- Advertisement -

Related news

error: Content is protected !!