- Advertisement -
- Advertisement -
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಯುವಕನೊಬ್ಬ ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಕೀರ್ತಿ ಕುಮಾರ್(30) ಎಂದು ಗುರುತಿಸಲಾಗಿದೆ.
ಕಾವೂರು ಸಮೀಪದ ತುಳಸಿ ನಿವಾಸದವರಾದ ಕೀರ್ತಿ ಕುಮಾರ್, ಮನೆಗೆ ಬಾರದೆ ಇದ್ದು, ಈ ಹಿನ್ನೆಲೆಯಲ್ಲಿ ಮನೆ ಮಂದಿ ಆತಂಕಗೊಂಡು ಪರಿಚಯದವರ ಸಹಿತ ಹಲವು ಕಡೆಗಳಲ್ಲಿ ವಿಚಾರಿಸಿದ್ದರು. ಆದರೆ ನಾಪತ್ತೆಯಾದವರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಕೀರ್ತಿ ಕುಮಾರ್ ಸಹೋದರ ಉಲ್ಲಾಸ್ ನೀಡಿದ ದೂರಿನ ಆಧಾರದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
- Advertisement -