Monday, April 29, 2024
spot_imgspot_img
spot_imgspot_img

ಮಂಗಳೂರು: ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ; 3 ಲಕ್ಷ ರೂ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ

- Advertisement -G L Acharya panikkar
- Advertisement -

ಮಂಗಳೂರು: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.

ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್ ಇನ್ಸ್‌ಪೆಕ್ಟರ್‌ ಕೆ.ಪಿ ಸುತೇಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ಪರಿಹಾರ ಒದಗಿಸಬೇಕು ಎಂದು ವಕೀಲ ಕುಲದೀಪ್ ಶೆಟ್ಟಿ ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.

ಹಲ್ಲೆಗೊಳಗಾದ ಸಂತ್ರಸ್ತ ಯುವ ವಕೀಲರಿಗೆ 3 ಲಕ್ಷರೂ. ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ಆದೇಶಿಸಿದೆ.

- Advertisement -

Related news

error: Content is protected !!