Friday, May 17, 2024
spot_imgspot_img
spot_imgspot_img

ಮಂಗಳೂರು: ಯು.ಟಿ. ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ

- Advertisement -G L Acharya panikkar
- Advertisement -
astr

ಮಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾದ ಯು.ಟಿ.ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಅವರು ಮೂರು ದಿನಗಳ ಕಾಲ ಅವರು ನಿಗದಿಗೊಳಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬರುತ್ತಿರುವ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಶಾಸಕರುಗಳಿಗೆ ಆರ್‌ಟಿಪಿಸಿಆರ್‌ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿತ್ತು.

ಈ ವೇಳೆ ಪರೀಕ್ಷೆಗೆ ಒಳಗಾದ ಯು.ಟಿ ಖಾದರ್‌ಅವರಿಗೆ ಕೋವಿಡ್‌ ಇರುವುದು ದೃಢ ಪಟ್ಟಿದೆ. ಹೀಗಾಗಿ ಅವರು ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅಗತ್ಯವಿದ್ದಲ್ಲಿ ದೂರವಾಣಿ ಸಂಪರ್ಕದಲ್ಲಿರಲು ಕೋರಿದ್ದಾರೆ.

- Advertisement -

Related news

error: Content is protected !!