- Advertisement -
- Advertisement -
ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ.
ಕಳೆದ ವಾರ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ನನ್ನು ಬಂಧನ ಮಾಡಿದ್ದರು. ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ನಡೆಸಿದ್ದು, ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ. ಘಟನೆಯಲ್ಲಿ ಪಿಎಸ್ ಐ ನಾಗೇಂದ್ರ, ಎಎಸ್ ಐ ಡೇವಿಡ್, ಎಎಚ್ ಸಿ ಸಂತೋಷ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ.
ಮಂಗಳೂರು: “ರಿವೆಂಜ್’ಗಾಗಿ ನಡೆಯಿತು ಮತ್ತೊಂದು ಮರ್ಡರ್” ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ.!!
- Advertisement -