- Advertisement -
- Advertisement -
ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಣದಿಂದ ದೂರ ಉಳಿಯುವ ಅಚ್ಚರಿಯ ನಿರ್ಧಾರ ಮಾಡಿದ್ದಾರೆ.
ದ.ಕ, ಉಡುಪಿ ಉಭಯ ಜಿಲ್ಲೆಗಳ ಸಹಕಾರಿಗಳು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣೆಗೆ ಸ್ಪರ್ಧಿಸುವ ಮನ ಮಾಡಿದ್ದರು. ಅ.23 ರಂದು ಈ ಬಗ್ಗೆ ನಾಮಪತ್ರ ಸಲ್ಲಿಸುವುದಾಗಿಯೂ ಅವರು ಈ ಹಿಂದೆ ತಿಳಿಸಿದ್ದರು.
- Advertisement -