ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ , ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು ಸರ್ವಾಧಿಕಾರಿ ಗಳಂತೆ ವರ್ತಿಸುವುದು,
ಕ್ಷುಲ್ಲಕ ಕಾರಣಗಳನ್ನು ನೀಡಿ ವಿದೇಶಿ ಪ್ರವಾಸಕೈಗೊಳ್ಳುವ ಅನಿವಾಸಿಗಳ ಪ್ರಯಾಣವನ್ನು ಮೊಟಕುಗೊಳಿಸಿ ಹಿಂದಿರುಗಿಸುವುದು, ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕಸ್ಟಮ್ಸ್ ಹೆಸರಲ್ಲಿ ದುಬಾರಿ ದಂಡ ವಿದಿಸುವುದು , ಸೇರಿದಂತೆ ಹಲವು ರೀತಿಯ ಕಿರುಕುಳವನ್ನು ನೀಡುವ ಬಗ್ಗೆ ನೂರಾರು ಸಂಖ್ಯೆಯ ಪ್ರಯಾಣಿಕರು SDPI ಪಕ್ಷದ ನಾಯಕರ, ಕಾರ್ಯಕರ್ತರ ಬಳಿ ತಮ್ಮ ಅಳಲನ್ನು ತೋಡಿಕೊಂಡರು.
ಇದನ್ನು ಗಂಬೀರವಾಗಿ ಪರಿಗಣಿಸಿದ ಪಕ್ಷವು ಈಗಾಗಲೇ ವಿಮಾನ ನಿಲ್ದಾಣದ ಹಲವಾರು ಇಲಾಖೆಗಳ ಅಧಿಕಾರಿಗಳನ್ನು ಭೇಟಿಯಾಗಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ ,ಅದರ ಮುಂದುವರಿದ ಬಾಗವಾಗಿ ಇಂದು SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ನೇತ್ರತ್ವದ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾಕ್ಟರ್ ರಾಜೇಂದ್ರ ಕೆ ವಿ ಯವರನ್ನು ಬೇಟಿಯಾಗಿ ಈ ವಿಚಾರವನ್ನು ಅವರ ಗಮನಕ್ಕೆ ತಂದು ಈ ಬಗ್ಗೆ ವರದಿ ತರಿಸಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು .
ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರಯಾಣಿಕರಿಗೆ ನಿರಾಳವಾಗಿ ಪ್ರಯಾಣಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿಮಾನ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಲಿದೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.
ಜಿಲ್ಲಾಧಿಕಾರಿಯನ್ನು ಬೇಟಿ ನೀಡಿದ ನಿಯೋಗದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮುನೀಬ್ ಬೆಂಗರೆ , ಜಿಲ್ಲಾ ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆಮಜಲು, ಉಳ್ಳಾಲ ಕ್ಷೇತ್ರದ ಅದ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ,ಕ್ಷೇತ್ರ ಕಾರ್ಯದರ್ಶಿ ಝಾಹಿದ್ ಮಲಾರ್ ಹಾಗೂ ಇತರರು ಉಪಸ್ಥಿತರಿದ್ದರು.