Saturday, April 20, 2024
spot_imgspot_img
spot_imgspot_img

ಮಂಗಳೂರು: ವಿವಾಹಿತೆ ಮಹಿಳೆ ನೇಣಿಗೆ ಶರಣು

- Advertisement -G L Acharya panikkar
- Advertisement -

ಮಂಗಳೂರು: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ ಪುತ್ರಿ, ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತಪಟ್ಟವರು.

ಜನವರಿ 21ರಂದು ದಿವ್ಯಾ ಪತಿ ಹರೀಶ್ ಜೊತೆ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಈ ವೇಳೆ ಪತಿ-ಪತ್ನಿ ನಡುವೆ ಮನಸ್ತಾಪ ಉಂಟಾಗಿತೆನ್ನಲಾಗಿದೆ. ಇದರಿಂದ ಬೇಸರಗೊಂಡ ದಿವ್ಯಾ ಒಬ್ಬರೇ ಮನೆಗೆ ಹಿಂದಿರುಗಿದ್ದರು. ಈ ವಿಚಾರವಾಗಿ ಅಸಮಾಧಾನಗೊಂಡಿದ್ದ ದಿವ್ಯಾ ಜೀವನದಲ್ಲಿ ಜಿಗುಪ್ಸೆಗೊಂಡು ಜ.22ರಂದು ಸಂಜೆ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!