Friday, May 3, 2024
spot_imgspot_img
spot_imgspot_img

ಮಂಗಳೂರು: ಶಾಲೆಗೆ ಹೊರಟಿದ್ದ ಬಾಲಕ ಹೃದಯಾಘಾತಕ್ಕೆ ಬಲಿ

- Advertisement -G L Acharya panikkar
- Advertisement -

ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಆದಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

- Advertisement -

Related news

error: Content is protected !!