
ಮಂಗಳೂರು: ನಗರದ ಮೋರ್ಗನ್ ಗೇಟ್ ಬಳಿ ನಡೆದ ಶೂಟೌಟ್ ಪ್ರಕರಣದಲ್ಲಿ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಕಡಲನಗರಿಯಲ್ಲಿ ಹಾಡಹಗಲೇ ಶೂಟೌಟ್; ಕೆಲಸದಾಳಿಗೆ ಹಾರಿಸಿದ ಗುಂಡು ತನ್ನ ಮಗನ ಜೀವಕ್ಕೆ ಕುತ್ತು

ಆರೋಪಿ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆದರೆ, ರಾಜೇಶ್ ಪ್ರಭು ಹೃದಯಾಘಾತಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸ್ ವಶದಲ್ಲಿದ್ದುಕೊಂಡೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎರಡು ದಿನಗಳ ಹಿಂದೆ ಮೋರ್ಗನ್ ಗೇಟ್ ನಲ್ಲಿರುವ ವೈಷ್ಣವಿ ಕಾರ್ಗೋ ಸಂಸ್ಥೆಯ ಕಚೇರಿಯಲ್ಲಿ ಸಂಬಳದ ವಿಚಾರದಲ್ಲಿ ತಕರಾರು ನಡೆಸಿದ್ದ ಇಬ್ಬರು ಕೆಲಸದಾಳುಗಳ ಮೇಲಿನ ಕೋಪದಲ್ಲಿ ರಾಜೇಶ್ ಪ್ರಭು ತನ್ನಲ್ಲಿದ್ದ ಪಿಸ್ತೂ ಲ್ ತೆಗೆದು ಶೂಟ್ ಮಾಡಿದ್ದು ಈ ವೇಳೆ ಗುಂಡು ತಪ್ಪಾಗಿ ರಾಜೇಶ್ ಪ್ರಭು ಮಗ ಸುಧೀಂದ್ರ ನ ಮೇ ಲೆ ಬಿದ್ದಿತ್ತು .
ತೀವ್ರ ಗಾಯಗೊಂಡಿದ್ದ ಸುಧೀಂದ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧೀಂದ್ರ ಪ್ರಭು ತಲೆಗೆ ಗುಂಡೇಟು ಬಿದ್ದಿದ್ದರಿಂದ ಮೆದುಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದ್ದು , ಮೆದುಳು ನಿಷ್ಕ್ರಿಯ ಆಗಿದೆಯೆಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಕುಟುಂಬಸ್ಥರು ಅಧಿಕೃತವಾಗಿ ದೃಢಪಡಿಸಿಲ್ಲ. ಮಗನಿಗೆ ಗುಂಡೇಟು ಬಿದ್ದಆಘಾತದಲ್ಲಿ ತಂದೆ ರಾಜೇಶ್ ಪ್ರಭುವಿಗೆ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ.









