- Advertisement -
- Advertisement -
ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪಿ ಕೇರಳದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಲ್ಲಿಕೋಟೆಯ ಜಿಜೊ ಜಾನ್ ಪಿ.ಕೆ (29) ಎಂಬಾತನನ್ನು ಮಂಗಳೂರು ನಗರ ಸೆನ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ. ಆರೋಪಿಯು ಪ್ರತೀ ತಿಂಗಳು ಶೇ.15 ಲಾಭಾಂಶ ನೀಡುವುದಾಗಿ ಶಕ್ತಿನಗರ ಪರಿಸರದ ನಿವಾಸಿಯಿಂದ ಸುಮಾರು 1 ಕೋ.ರೂ. ಗಳನ್ನು ಹೂಡಿಕೆ ಮಾಡಿಸಿ ಬಳಿಕ ಲಾಭಾಂಶ ನೀಡದೆ ವಂಚಿಸಿದ್ದ ಎಂದು ದೂರು ದಾಖಲು ಮಾಡಲಾಗಿತ್ತು. ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ, ಎಸ್ಐ ಲೀಲಾವತಿ ಮತ್ತಿತರರು ಪಾಲ್ಗೊಂಡಿದ್ದರು.
- Advertisement -