Saturday, June 28, 2025
spot_imgspot_img
spot_imgspot_img

ಮಂಗಳೂರು: ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ದೌಡಾಯಿಸಿದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್

- Advertisement -
- Advertisement -
vtv vitla

ಮಂಗಳೂರು: ಜಿಲ್ಲೆಯಲ್ಲಿ ನಡೆದಿರುವ ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ.

ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ ನೆಟ್ಟಾರು,ಫಾಝಿಲ್‌, ಮಸೂದ್‌ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ದ.ಕ ಜಿಲ್ಲೆ ಬೂದಿ ಮುಚ್ಚಿದ ಕೆಂಡಾದಂತೆ ಇರುವುದರಿಂದ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯ ಕುರಿತು ಪ್ರವೀಣ್ ಸೂದ್ ಮಾಹಿತಿ ಪಡೆದುಕೊಂಡರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸಹಿತ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!