- Advertisement -
- Advertisement -
ಮಂಗಳೂರು: ಕೊಟ್ಟಾರ ಚೌಕಿ ಬಳಿಯ ಹೊಟೇಲೊಂದರ ಎದುರು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಾ ಪರಸ್ಪರ ಕಿರುಚಾಡುವುದರಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಜಿತ್ ಕುಮಾರ್, ನಿತಿನ್ ಕುಲಾಲ್, ಮತ್ತು ವಿನೋದ್ ಕುಲಾಲ್ ಎಂದು ಗುರುತಿಸಲಾಗಿದೆ.
ಈ ಮೂವರು ಬಿಯರ್ ಬಾಟಲ್ ಗಳನ್ನು ಹಿಡಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಪಾಯಕಾರಿಯಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -