- Advertisement -
- Advertisement -
ಮಂಗಳೂರು: ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವ ಹೋರಾಟದ ವಿಚಾರವಾಗಿ ಹಿಂದೂ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯ ಸಂದೇಶಗಳು ರವಾನೆಯಾಗುತ್ತಿದೆ.
ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವ ನಿಟ್ಟಿನಲ್ಲಿ ಬೃಹತ್ ಹೋರಾಟ ನಡೆಸಲಿದ್ದು, ಈ ಹೋರಾಟದಲ್ಲಿ ಮುಸ್ಲಿಂ ಸಂಘಟನೆಗಳು ಭಾಗಿಯಾಗುತ್ತಿವೆ.
ಈ ಹೋರಾಟದಲ್ಲಿ ಭಾಗಿಯಾಗುವ ನೆಪವೊಡ್ಡಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಿ ಹಿಂದೂ ಕಾರ್ಯಕರ್ತರ ಮೇಲೆ ದುಷ್ಕೃತ್ಯ ಎಸಗಲು ಕೆಲವೊಂದು ಗುಂಪುಗಳು ಸಿದ್ಧವಾಗಿವೆ ಎಂಬ ಸಂದೇಶವು ಹಿಂದೂ ಕಾರ್ಯಕರ್ತರ ನಡುವೆ ಹರಿದಾಡುತ್ತಿದೆ.
ಸಾವಿರಾರು ಜನರಿಂದ ಟೋಲ್ ಗೇಟ್ ವಿಚಾರವಾಗಿ ಹೋರಾಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ಬಳಿ ಬಿಗಿ ಬಂದೋ ಬಸ್ತ್ ವಿಧಿಸಲಾಗಿದೆ. ಆದರೆ ಈ ನಡುವೆಯೂ ಕೆಲವು ಮತಾಂಧ ಶಕ್ತಿಗಳು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಸಾಧ್ಯತೆಗಳಿವೆ, ಈ ನಿಮಿತ್ತ ಎಚ್ಚರಿಕೆ ವಹಿಸಿ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
- Advertisement -