- Advertisement -
- Advertisement -


ಮಂಗಳೂರು: ಬೈಕಂಪಾಡಿಯ ಮೀನಕಳಿಯಲ್ಲಿ ರೌಡಿಶೀಟರ್ ಟ್ಯಾಟೂ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕಲ್ ನವೀನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈಗ ಬಂಧಿಸಿದ ಆರೋಪಿಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಮೈಕಲ್ ನವೀನ್ ಎಂಬಾತನ ಮೇಲೆ ಈಗಾಗಲೇ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಕೇಸುಗಳಿವೆ. ಟ್ಯಾಟೂ ರಾಜಾನ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ಇದಕ್ಕೂ ಮುಂಚೆ ಎರಡು ಆರೋಪಿಗಳನ ಮೂಲಕ ಮೂಲ್ಕಿ ಎಂಬಲ್ಲಿ ಇತರರನ್ನು ಬಂಧಿಸಲು ಹೋದಾಗ ಆರೋಪಿಗಳನ್ನು ಪೊಲೀಸರ ಮೇಲೆ ಹಲ್ಲೆಗೈದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದರು.
- ಖ್ಯಾತ ಮಲಯಾಳಂ ಸಿನಿಮಾ ನಟ ಸಲೀಂ ಕುಮಾರ್ ಹೃದಯಘಾತದಿಂದ ನಿಧನ
- ಉಳ್ಳಾಲ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
- ಸರಕಾರಿ ಆಸ್ಪತ್ರೆಯಲ್ಲಿ ಲಂಚ ನೀಡಿಲ್ಲ ಎಂದು ಬಾಲಕಿಯ ಕಾಲನ್ನು ಮತ್ತೆ ಉದ್ದೇಶಪೂರ್ವಕವಾಗಿ ಮುರಿದ ವೈದ್ಯ; ಆರೋಪ
- ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ನೀರುಪಾಲು
- ಮನೆಯ ಆವರಣ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು


- Advertisement -








