Thursday, March 28, 2024
spot_imgspot_img
spot_imgspot_img

ಮಂಗಳೂರು: ಹಿಜಾಬ್ ವಿವಾದ; ವರ್ಗಾವಣೆ ಪ್ರಮಾಣಪತ್ರ ನೀಡುವಂತೆ ಐವರು ವಿದ್ಯಾರ್ಥಿಗಳಿಂದ ಅರ್ಜಿ

- Advertisement -G L Acharya panikkar
- Advertisement -

ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನಿರಾಕರಿಸಿದ ನಂತರ ಕಾಲೇಜು ಆಡಳಿತ ಮಂಡಳಿಯಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ಕೇಳಿದ್ದಾರೆ.

ಕಾಲೇಜಿನ ಪ್ರಾಂಶುಪಲೆ ಅನುಸೂಯಾ ರೈ ಅವರು ಐವರು ವಿದ್ಯಾರ್ಥಿಗಳು ಇತರ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ದೃಢಪಡಿಸಿದ್ದಾರೆ. ಕೆಲವು ತಿದ್ದುಪಡಿಗಳನ್ನು ಮಾಡುವ ಮತ್ತೊಂದು ಪತ್ರವನ್ನು ಸಲ್ಲಿಸುವಂತೆ ಅವರನ್ನು ಕೇಳಲಾಗಿದೆ. ಹುಡುಗಿಯರು ಪತ್ರಗಳನ್ನು ಸಲ್ಲಿಸಿದ ನಂತರ ಪ್ರಮಾಣಪತ್ರಗಳನ್ನು ನೀಡುವ ಬಗ್ಗೆ ಕಾಲೇಜು ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

vtv vitla
- Advertisement -

Related news

error: Content is protected !!