Saturday, May 18, 2024
spot_imgspot_img
spot_imgspot_img

ಮಂಗಳೂರು: ಹೃದಯಾಘಾತದಿಂದ ಖ್ಯಾತ ವೈದ್ಯ ನಿಧನ

- Advertisement -G L Acharya panikkar
- Advertisement -

ಚಳಿಗಾಲದಲ್ಲಿ ಹೃದಯಾಘಾತಕ್ಕೆ ಒಳಗಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ತಜ್ಞ ವೈದ್ಯರೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ, ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ ಅಸುನೀಗಿದ್ದಾರೆ.

ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ ಮೃತಪಟ್ಟ ವೈದ್ಯರು. ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಗಳಿಗಿಂತ ಹೆಚ್ಚು ಕಾಲ ರೇಡಿಯೇಷನ್ ಆಂಕಾಲಜಿ ಚಿಕಿತ್ಸಾ ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ರೇಡಿಯೇಷನ್ ಅಂಕೋಲಾಜಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!