Monday, May 20, 2024
spot_imgspot_img
spot_imgspot_img

ಮಂಗಳೂರು: ಹೆರಿಗೆ ವೇಳೆ ತಾಯಿ – ಮಗು ಸಾವು

- Advertisement -G L Acharya panikkar
- Advertisement -

ಮಂಗಳೂರು: ನಗರದ ವಕೀಲೆ ಗಾಯತ್ರಿ (38) ಎಂಬವರು ಪ್ರಥಮ ಹೆರಿಗೆ ಸಂದರ್ಭ ಗರ್ಭದಲ್ಲಿದ್ದ ಮಗು ಸಹಿತ ಮೃತಪಟ್ಟ ಘಟನೆ ಫೆ. 24 ಗುರುವಾರ ನಸುಕಿನ ಜಾವ ನಡೆದಿದೆ.

ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ ಅವರು ಪುತ್ತೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಸುಮಾರು 8 ವರ್ಷ ವಕೀಲ ವೃತ್ತಿ ಮಾಡಿದ್ದ ಗಾಯತ್ರಿ 2010ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ಅವರೊಂದಿಗೆ ವಿವಾಹವಾಗಿತ್ತು. 2017ರಿಂದ ನಗರದ ಲೇಡಿಹಿಲ್ ಸಮೀಪ ವಾಸ್ತವ್ಯ ಹೊಂದಿದ್ದರು. ಅಲ್ಲದೆ ವಕೀಲ ವೃತ್ತಿ ಪುನರಾರಂಭಿಸಿದ್ದರು.

vtv vitla
vtv vitla

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದ ಗಾಯತ್ರಿ ಪುತ್ತೂರಿನ ವಕೀಲ ಸಂಘದ ಸದಸ್ಯತ್ವ ಹೊಂದಿದ್ದರು.

ಫೆ. 23 ರ ಬುಧವಾರ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗುರುವಾರ ಬೆಳಗ್ಗಿನ ಜಾವ ಹೆರಿಗೆಯ ಸಂದರ್ಭ ಮಗು ಸಹಿತ ಕೊನೆಯುಸಿರೆಳೆದಿದ್ದಾರೆ.

ಮೃತರು ಮೃತರು ಪತಿ, ಸಹೋದರಿ ವಕೀಲೆ ಅಕ್ಷತಾ ಹಾಗೂ ಸಹೋದರ ದಯಾನಂದ ಅವರನ್ನು ಅಗಲಿದ್ದಾರೆ.

- Advertisement -

Related news

error: Content is protected !!