Wednesday, April 24, 2024
spot_imgspot_img
spot_imgspot_img

ಮಂಗಳೂರು: NIA ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸ್‌ ವಶಕ್ಕೆ

- Advertisement -G L Acharya panikkar
- Advertisement -

ಮಂಗಳೂರು: NIA ದಾಳಿ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆಲ್ಲಿಕಟ್ಟೆಯಲ್ಲಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ NIA ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಈ ವೇಳೆ ಇನ್ನೂರಕ್ಕೂ ಅಧಿಕ ಮಂದಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ, ಎಸ್‌ಡಿಪಿಐ ಇದರ 50ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಮನೆಗೆ ತೆರಳಲು ಸೂಚಿಸಿದೆವು. ಆದರೆ ಅವರು ಸ್ಥಳ ಬಿಟ್ಟು ಕದಲಲಿಲ್ಲ. ಬಂದರು ಸೂಕ್ಷ್ಮಪ್ರದೇಶವಾಗಿದ್ದು ಇಲ್ಲಿ ಪ್ರತಿಭಟನೆ ನಡೆಸಿದರೆ ಅನಾಹುತ ಸಾಧ್ಯತೆ ಇರುವುದರಿಂದ ಕೊನೆಗೆ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದು ಶಶಿಕುಮಾರ್ ತಿಳಿಸಿದರು.

astr
- Advertisement -

Related news

error: Content is protected !!