- Advertisement -
- Advertisement -
ಮಂಜೇಶ್ವರ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ತಲಪಾಡಿ ಕೆ.ಸಿ.ರೋಡ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರು ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್(23), ಕೃಷ್ಣ ಪ್ರಸಾದ್ (25) ಎನ್ನಲಾಗಿದೆ.
ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ವಾಪಾಸಾಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಕೆ.ಸಿ. ರೋಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.
- Advertisement -