Friday, May 24, 2024
spot_imgspot_img
spot_imgspot_img

ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಮಹಿಳೆ

- Advertisement -G L Acharya panikkar
- Advertisement -

ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್‌ ಶೆಟ್ಟಿ ಮೃತಪಟ್ಟ ತಾಯಿ-ಮಗ. ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯ ಬಸವನಪುರ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

36 ವರ್ಷದ ರೋಹಿಣಿ ಗೃಹಿಣಿಯಾಗಿದ್ದರು. ಪತಿ ಪ್ರವೀಣ್‌ ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ರೋಹಿಣಿ ತಾಯಿ 12 ವರ್ಷಗಳ ಹಿಂದೆ ನೇಣು ಬಿಗಿದು ಕೊಂಡು ಸಾವನ್ನಪ್ಪಿದ್ದರು. ಆಗಿನಿಂದಲೂ ಮಾನಸಿಕ ಖನ್ನತೆಗೆ ಒಳಗಾಗಿದ್ದ ರೋಹಿಣಿ, ಮದುವೆಯಾದ ಬಳಿಕವೂ ಎರಡು-ಮೂರು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಏ.17 ರಂದು ರಾತ್ರಿ ಊಟ ಮುಗಿಸಿ ಪ್ರತ್ಯೇಕ ಕೊಠಡಿಯಲ್ಲಿ ತಾಯಿ-ಮಗ ಮಲಗಿದ್ದರು. ಮಾರನೇ ದಿನ ಬೆಳಗ್ಗೆ ಪ್ರವೀಣ್‌, ಹೆಂಡತಿ ಮಲಗಿದ್ದ ಕೊಠಡಿ ಕದ ತಟ್ಟಿದ್ದು, ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಕಂಡು ಅನುಮಾನ ಉಂಟಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ಒಳ ಹೋದಾಗ ತಾಯಿ-ಮಗ ಆತ್ಮಹತ್ಯೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ. ಐದು ವರ್ಷದ ಮಗನನ್ನು ಸಾಯಿಸಿ ಬಳಿಕ ಅದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!