- Advertisement -
- Advertisement -
ಮಡಿಕೇರಿ : ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮೃತಪಟ್ಟಿದೆ.
ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಯಿತಾದರೂ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗಿನ ಜಾವ ಮಗು ಮ್ಮತಪಟ್ಟಿದೆ ಎಂದು ತಿಳಿದು ಬಂದಿದೆ.
- Advertisement -