Friday, March 29, 2024
spot_imgspot_img
spot_imgspot_img

ಮಡಿಕೇರಿ: ಪೈಂಟಿಂಗ್ ಕೆಲಸಕ್ಕೆಂದು ಬಂದು ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಖತರ್ನಾಕ್ ಚೋರ ಅರೆಸ್ಟ್!

- Advertisement -G L Acharya panikkar
- Advertisement -

ಮಡಿಕೇರಿ: ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಚೋರನನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಂಡ್ಯ ಜಿಲ್ಲೆಯ ಶ್ರೀ ರಂಗಪಟ್ಟಣದ ಗಂಜಾಂ ನಿವಾಸಿ ಸೈಯದ್ ಗೌಸ್ ಎನ್ನಲಾಗಿದೆ.

ಕುಶಾಲನಗರ ಪಟ್ಟಣದ ಬಸವೇಶ್ವ ರ ಬಡಾವಣೆ, ಕಾವೇರಿ ಬಡಾವಣೆಯಲ್ಲಿ 2 ಮನೆ ಕಳ್ಳತನ ಹಾಗೂ ದಂಡಿನಪೇಟೆಯಲ್ಲಿ 1 ವಾಹನ ಕಳವು ಪ್ರ ಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು . ಆರೋಪಿ ಸೈಯದ್ ಕುಶಾಲನಗರ ಸುತ್ತಮುತ್ತ ವ್ಯಾಪ್ತಿಯಲ್ಲಿ ಪೈಂಟಿಂಗ್ ಕೆಲಸಕ್ಕೆಂದು ಆಗಾಗ್ಗೆ ಬರುತ್ತಿದ್ದ . ಪಟ್ಟ ಣದಲ್ಲಿ ಬೀಗ ಹಾಕಿರುವ ಮನೆಗಳನ್ನು ಗಮನಿಸಿ ಕಳ್ಳತನಮಾಡುವುದು ಆತನ ಚಾಳಿ ಆಗಿತ್ತು .

ನ. 10 ರಂದು ರಾತ್ರಿ ಗಸ್ತಿನಲ್ಲಿದ್ದ ಕುಶಾಲನಗರ ಎಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿ ಅರುಣಕುಮಾರ್ ವಾಹನ ತಪಾಸಣೆ ವೇಳೆ ಈತನ ಬಗ್ಗೆ ಅನುಮಾನಗೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತನ ವಾಹನದಲ್ಲಿ ಮನೆ ಕಳ್ಳತನ ಮಾಡಲು ಬಳಸುವ ಆಯುಧ ಕಂಡುಬಂದಿದೆ. ಆತನಿಂದ 2 ಲಕ್ಷರೂ. ಮೌಲ್ಯದ ಚಿನ್ನಾಭರಣಗಳು, 1 ಮೊಬೈಲ್ ಫೋನ್ ಹಾಗೂ 1 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!