Monday, April 29, 2024
spot_imgspot_img
spot_imgspot_img

ಮಡಿಕೇರಿ : ಹಳೆ ವೈಷಮ್ಯ; ಗುಂಡು ಹಾರಿಸಿ ಹತ್ಯೆ

- Advertisement -G L Acharya panikkar
- Advertisement -

ಮಡಿಕೇರಿ : ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಕೊಡಗಿನ ವಿರಾಜಪೇಟೆಯ ತೋರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬೈಮನ ನಾಣಯ್ಯ ಅವರ ಪುತ್ರ ಬಿ.ಎಂ ಮಧು (44) ಮೃತ ದುರ್ದೈವಿ. ರಾತ್ರಿ 12ರ ವೇಳೆಗೆ ಗ್ರಾಮದ ಪಡಚಿಕಾಡು ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವಾರು ವರ್ಷಗಳಿಂದ ಮಧು ಹಾಗೂ ಊರಿನ ಕೆಲವರ ನಡುವೆ ಮನಸ್ತಾಪ ಇತ್ತು ಎಂದು ಹೇಳಲಾಗಿದೆ.

ಮಧು ಶನಿವಾರ ಸಂಜೆ 7 ಗಂಟೆಯಿಂದ ಸ್ನೇಹಿತರೊಂದಿಗೆ ಸೇರಿಕೊಂಡು ಮದ್ಯಪಾನ ಮಾಡಿದ್ದರು. ರಾತ್ರಿ ವೇಳೆ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಈ ಮೊದಲು ಮಧು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರು. ಕಳೆದ ಒಂದು ವರ್ಷದ ಹಿಂದೆ ಊರಿಗೆ ಮರಳಿ ತೋಟವನ್ನು ನೋಡಿಕೊಂಡು, ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡಿದ್ದರು.

ಘಟನಾ ಸ್ಥಳಕ್ಕೆ ಕೊಡಗು ಎಸ್‍ಪಿ ರಾಜರಾಜನ್ ಹಾಗೂ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!