Monday, April 29, 2024
spot_imgspot_img
spot_imgspot_img

ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ ಕೊಠಡಿಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

ಇಬ್ಬರು ಮಹಿಳೆಯರು ಸ್ವಾಮೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು. ಮಹಿಳೆಯರೊಂದಿಗೆ ಅವರ ವರ್ತನೆ ಸರಿಯಿಲ್ಲ ಎಂದು ಇಬ್ಬರು ಮಹಿಳೆಯರು ಮಾತನಾಡುತ್ತಿರುವ ಆಡಿಯೋ ಕಳೆದ ಒಂದು ವಾರದಿಂದ ವೈರಲ್ ಆಗಿತ್ತು. ಇದರಿಂದ ಸ್ವಾಮೀಜಿ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಇದೀಗ ಇದೇ ಕಾರಣಕ್ಕೆ ಬಸವ ಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬೈಲಹೊಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದಾರೆ.

- Advertisement -

Related news

error: Content is protected !!