Monday, April 29, 2024
spot_imgspot_img
spot_imgspot_img

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

- Advertisement -G L Acharya panikkar
- Advertisement -

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೇ ವೇಳೆ ಜೆಡಿಎಸ್ ವತಿಯಿಂದ ಆಯೋಜಿಸಲಾದ ಎನ್ನಲಾಗುತ್ತಿರುವ ಪ್ರವಾಸಿ ಬಸ್ಸುಗಳನ್ನು ಸೀಝ್ ಮಾಡಿದ ಘಟನೆ ನಡೆದಿದೆ. ಮತದಾರರಿಗೆ ಮತ್ತು ಮುಖಂಡರಿಗೆ ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಭಾಗ್ಯವನ್ನು ಕಲ್ಪಿಸಲಾಗಿತ್ತು. ಈಗ ಪ್ರವಾಸ ಮುಗಿಸಿ ವಾಪಸಾಗುವಾಗ ನಾಲ್ಕು ಬಸ್‌ ಅನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ಬಸ್‌ಗಳನ್ನು ಮಧುಗಿರಿ ತಾಲೂಕಿನ ಗಿಡದಾಗಲಹಳ್ಳಿ ಸಮೀಪ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು ನಾಲ್ಕು ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಮಧುಗಿರಿ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು.

- Advertisement -

Related news

error: Content is protected !!