Sunday, May 12, 2024
spot_imgspot_img
spot_imgspot_img

ಮತಾಂತರಕ್ಕೆ ಯತ್ನಿಸಿದ್ದ ಯುವಕನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಂಘಟನಾ ಕಾರ್ಯಕರ್ತರು

- Advertisement -G L Acharya panikkar
- Advertisement -

ಹಾಸನ: ಮತಾಂತರಕ್ಕೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಹಿಡಿದು ಥಳಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಕಾಲೇಜು ಬಳಿಯಲ್ಲಿ ವಿದ್ಯಾರ್ಥಿನಿಯರಿಗೆ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ ಪುಸ್ತಕ, ಕರಪತ್ರಗಳನ್ನು ಹಂಚುತ್ತಿದ್ದ ಯುವಕನೊಬ್ಬ ಸಿಕ್ಕಿಬಿದ್ದಿದ್ದು, ಸ್ಥಳಕ್ಕೆ ದೌಡಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕರಪತ್ರ ಹಂಚುತ್ತಿದ್ದ ಯುವಕನನ್ನು ಮನು ಎಂದು ಗುರುತಿಸಲಾಗಿದೆ. ಈತ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಬೈಕ್ ನಲ್ಲಿ ಬರುವ ಸವಾರರನ್ನು ನಿಲ್ಲಿಸಿ ಕ್ರೈಸ್ತ, ಇಸ್ಲಾಂ ಧರ್ಮದ ಕರಪತ್ರಗಳನ್ನು, ಪುಸ್ತಕಗಳನ್ನು ವಿತರಿಸುತ್ತಿದ್ದ ಎನ್ನಲಾಗಿದೆ.

- Advertisement -

Related news

error: Content is protected !!