- Advertisement -
- Advertisement -
ಶಿವಮೊಗ್ಗ: ಮದುವೆಯಲ್ಲಿ ಊಟ ಮಾಡಿದ್ದ 30ಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಉಂಟಾದ ಘಟನೆ ಇಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮಸ್ಥರಿಗೆ ವಾಂತಿ ಭೇದಿ ಉಂಟಾಗಿದೆ. ಮದುವೆಯಲ್ಲಿ ಊಟ ಮಾಡಿದ್ದವರಿಗೆ ವಾಂತಿ ಭೇದಿ ಕಂಡುಬಂದಿದೆ. ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು ಅಸ್ವಸ್ಥರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಲದಳ್ಳಿ ಸೋಮಿನಕೊಪ್ಪ ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ ಆಗಿದ್ದರು ಎಂದು ತಿಳಿದುಬಂದಿದೆ. ಮದುವೆ ಮನೆಯಲ್ಲಿ ಊಟದ ಬಳಿಕ ಜನರಲ್ಲಿ ವಾಂತಿ ಬೇಧಿ ಶುರುವಾಗಿದೆ ಎನ್ನಲಾಗಿದೆ. 30 ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ.
- Advertisement -