- Advertisement -
- Advertisement -


ಬೆಂಗಳೂರು: ಯುವಕನೋರ್ವ ಮದುವೆ ಆಗಿದ್ದರೂ ಬೇರೆ ಯುವತಿ ಜತೆ ಫೇಸ್ಬುಕ್ ಪ್ರೀತಿಯಲ್ಲಿ ಬಿದ್ದಿದ್ದಾನೆ. ಮದುವೆಯಾಗಿರುವ ವಿಚಾರ ತಿಳಿದು ಯುವತಿ ರಂಪಾಟ ಮಾಡಿದ ಹಿನ್ನೆಲೆಯಲ್ಲಿ ನೊಂದು ಚೇತನ್ (27) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಘಟನೆ ನಡೆದಿದೆ. 4 ವರ್ಷದ ಹಿಂದೆ ತುಮಕೂರಿನ ನವ್ಯಾ ಜತೆ ಚೇತನ್ಗೆ ವಿವಾಹವಾಗಿತ್ತು. ನವ್ಯಾ, ಚೇತನ್ ದಂಪತಿಗೆ 3 ವರ್ಷದ ಹೆಣ್ಣುಮಗುವಿದೆ. 1 ವರ್ಷದ ಹಿಂದೆ ಕೌಟುಂಬಿಕ ಕಲಹದಿಂದ ಚೇತನ್ ಪತ್ನಿಯನ್ನು ತೊರೆದಿದ್ದ. ನಂತರ ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆಹೋಗಿದ್ದ.
ಈ ನಡುವೆ ಫೇಸ್ಬುಕ್ನಲ್ಲಿ ಯುವತಿ ಜೊತೆಗೆ ಪ್ರೀತಿಗೆ ಬಿದ್ದಿದ್ದು, ಮದುವೆಯಾಗಿದ್ದ ವಿಚಾರ ತಿಳಿದು ಯುವತಿ ರಂಪಾಟ ನಡೆಸಿದ್ದಾಳೆ. ಇದರಿಂದ ನೊಂದು ಚೇತನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -