- Advertisement -
- Advertisement -
ಕೇರಳ: ಮದುವೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆಯೋರ್ವಳು ಆ್ಯಸಿಡ್ ಎರಚಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಪ್ರಿಯಕರ ತಿರುವನಂತಪುರಂ ಜಿಲ್ಲೆಯ ಪೂಜಾಪ್ಪುರ ಮೂಲದ ಅರುಣ್ ಕುಮಾರ್ (27) ಎನ್ನಲಾಗಿದೆ.
35 ವರ್ಷದ ಮಹಿಳೆ ಶೀಬಾಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅರುಣ್ ಪರಿಚಯವಾಗಿದ್ದು, ಆ ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆದರೆ ಅರುಣ್ ಬೇರೆ ಮದುವೆಯಾಗಲು ನಿರ್ಧರಿಸಿದ್ದ. ಇದರಿಂದ ಕೋಪಗೊಂಡ ಶೀಬಾ ಅರುಣ್ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಶೀಬಾ ಅವರ ಮುಖ ಮತ್ತು ಕೈಗೂ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಶೀಬಾಳನ್ನು ಆದಿಮಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -