- Advertisement -
- Advertisement -
ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ . ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣ ಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಪರಸ್ಪರ ಪ್ರೀತಿಸ್ತಿದ್ದ ಯುವಕ- ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸದ್ಯ ಇವರ ಮೃತದೇಹ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- Advertisement -