Friday, May 3, 2024
spot_imgspot_img
spot_imgspot_img

ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ

- Advertisement -G L Acharya panikkar
- Advertisement -

ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ತುಮಕೂರಿನ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿದೆ.

ನಟರಾಜು ಎಂಬುವರ ಮನೆ ಬಳಿ ಪ್ರತ್ಯಕ್ಷವಾದ ಚಿರತೆ, ಕೆಲ ಕಾಲ ನಿಂತಿದೆ. ನಂತರ ನಾಯಿಯನ್ನು ಹೊತ್ತುಕೊಂಡು ಹೋಗಿದೆ. ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

Related news

error: Content is protected !!