Monday, June 30, 2025
spot_imgspot_img
spot_imgspot_img

ಮಲ್ಪೆ: ಬಂದರಿನ ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು

- Advertisement -
- Advertisement -

ಮಲ್ಪೆ: ಬಂದರಿನಲ್ಲಿ ಮೀನುಗಾರರೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ನಡೆದಿದೆ.

ಕಟ್ಟಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಮೃತಪಟ್ಟವರು.

ಮೀನುಗಾರರಾಗಿದ್ದ ಇವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಲ್ಪೆಯ ಜೈಬಲರಾಮ್ ಲೈಲ್ಯಾಂಡ್ ಬೋಟ್ ಪಡ್ಡೆಗೆ ಹೋಗುತ್ತಿದ್ದಾಗ ಬಂದರ್ ನ ಒಳಗೆ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿಕೊಂಡಿದ್ದರು. ತಕ್ಷಣ ಅವರನ್ನು ಹುಡುಕಾಡಿ ಹೂಳಿನಿಂದ ಮೇಲಕ್ಕೆತ್ತಿ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸಂತೋಷ್ ಅವರ ಮೃತ ದೇಹವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಮಲ್ಪೆ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!