Sunday, May 19, 2024
spot_imgspot_img
spot_imgspot_img

ಮಳಲಿ ಮಸೀದಿ ವಿಚಾರ; ಹೈಕೋರ್ಟ್ ನಲ್ಲಿ ಮೇಲ್ಮನವಿ ತಿರಸ್ಕೃತ

- Advertisement -G L Acharya panikkar
- Advertisement -

ಬೆಂಗಳೂರು: ದಕ್ಷಿಣ ಕನ್ನಡದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಮೂಲ ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಧನಂಜಯ್ ಮತ್ತು ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠವು ಜೂನ್ 24ರಂದು ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಕಮಿಷನರ್ ನೇಮಕ ಮಾಡಿ ಸ್ಥಳ ಪರಿಶೀಲನೆಗೆ ಅವಕಾಶ ನೀಡಲಾಗಿದ್ದು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿರುವ ಕುರಿತು ಪರಿಶೀಲನೆ ನಡೆಸಲು ಕಮಿಷನರ್ ನೇಮಕ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.

- Advertisement -

Related news

error: Content is protected !!