Wednesday, April 24, 2024
spot_imgspot_img
spot_imgspot_img

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಕಾಳಿಚರಣ್​ ಮಹಾರಾಜ್’ರನ್ನು ಬಂಧಿಸಿದ ಪೊಲೀಸರು!!

- Advertisement -G L Acharya panikkar
- Advertisement -

ಮಧ್ಯಪ್ರದೇಶ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದಡಿಯಲ್ಲಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್​ ಮಹಾರಾಜ್’ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ.‌

vtv vitla

ಡಿಸೆಂಬರ್​ 26ರಂದು ನಡೆದ ಧಾರ್ಮಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕಾಳಿ ಚರಣ್,​​ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ಹಾಡಿ ಹೊಗಳಿದ್ದರು. ಧರ್ಮವನ್ನು ರಕ್ಷಿಸುವ ಸಲುವಾಗಿ ಕಟ್ಟಾ ಹಿಂದೂ ನಾಯಕನನ್ನು ಸರ್ಕಾರದ ಮುಖ್ಯಸ್ಥನನ್ನಾಗಿ ಆಯ್ಕೆ ಮಾಡಿ ಎಂದು ಹೇಳಿದ್ದರು.

ಕಾಳಿಚರಣ್​​ ಮಧ್ಯಪ್ರದೇಶದ ಖಜುರಾಹೊದಿಂದ 25 ಕಿಮೀ ದೂರದಲ್ಲಿರುವ ಬಾಗೇಶ್ವರ್ ಧಾಮ್ ಬಳಿ ಬಾಡಿಗೆ ವಸತಿಗೃಹದಲ್ಲಿ ತಂಗಿದ್ದರು. ಇಂದು ಮುಂಜಾನೆ 4 ಗಂಟೆಗೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಾಳಿ ಚರಣ್​ ವಿರುದ್ಧ ಐಪಿಸಿ ಸೆಕ್ಷನ್​ 294,295 ಎ,298,505(2) ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಕೇಸ್​ ದಾಖಲಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!