Thursday, May 2, 2024
spot_imgspot_img
spot_imgspot_img

ಮಹಿಳೆಯ ಸರ ಕಿತ್ತ ಚೋರರಿಗೆ ಅಲ್ಲೇ ಬಂಪರ್‌ ಬಹುಮಾನ..! ಅಪಘಾತಕ್ಕೀಡಾಗಿ ಇಬ್ಬರು ಕಳ್ಳರು ಗಂಭೀರ

- Advertisement -G L Acharya panikkar
- Advertisement -

ಕಡಬ: ಕಾರಿನಲ್ಲಿ ಬಂದ ಕಳ್ಳರು ಮಹಿಳೆಯೊಬ್ಬರ ಸರ ಕದ್ದು ಪರಾರಿಯಾಗುತ್ತಿರುವ ವೇಳೆ ಅಪಘಾತಗೊಂಡು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದೆ.

ಮಹಿಳೆಯೊಬ್ಬರು ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಳ್ಳನು ಸರ ಕಿತ್ತುಕೊಂಡು ಪರಾರಿಯಾಗಿದ್ದರು.ತಕ್ಷಣ ಮಹಿಳೆ ಕಿರುಚಿಕೊಂಡಾಗ ಸ್ಥಳದಲ್ಲಿದ್ದ ಜನರು ಕಳ್ಳರನ್ನು ಬೆನ್ನಟ್ಟಿದ್ದಾರೆ. ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದ್ದರಿಂದ ಇಬ್ಬರು ಅಪಘಾತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಇಬ್ಬರು ಕೂಡ ಕಳ್ಳತನಕ್ಕಾಗಿಯೇ ಕಾಸರಗೋಡಿನಿಂದ ಬಂದಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!