Saturday, June 28, 2025
spot_imgspot_img
spot_imgspot_img

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

- Advertisement -
- Advertisement -
vtv vitla

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ಸಲ್ಲಿಸಲಾಯಿತು. ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ ಯವರು ಮಾತನಾಡಿ, ಬಡಕುಟುಂಬದಲ್ಲಿ ಜನಿಸಿದ ಅಂಬೇಡ್ಕರರು ಸಮಾಜಮುಖೀ ಚಿಂತನೆಗಳನ್ನು ಮೈಗೂಡಿಸಿಕೊಂಡ ಸಾಧಕರು, ಅವರ ಅಪಾರ ಜ್ಞಾನದಿಂದ ಇಡೀ ಜಗತ್ತು ಮೆಚ್ಚುವ ಭಾರತದ ಸಂವಿಧಾನವನ್ನು ರಚಿಸಿದ ಮಹನೀಯರು ಎಂದ ಅವರು, ಅಂಬೇಡ್ಕರರು ನೀಡಿದ ಕೊಡುಗೆಗಳ ಬಗ್ಗೆ‌ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ ಶೆಟ್ಟಿ, ಸಹಾಯಕ ಮುಖ್ಯ ಶಿಕ್ಷಕಿ ಮೋಹಿನಿ ರೈ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಶೋಭ ಪ್ರಾರ್ಥಿಸಿದರು. ಶಿಕ್ಷಕಿ ಐಡಾ ಲೋಬೋ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ವಂದಿಸಿದರು.

- Advertisement -

Related news

error: Content is protected !!