ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಸಂಘದ ಪಡ್ನೂರು ಕೊಡಂಗಾಯಿಯಲ್ಲಿರುವ ಪುಧಾನ ಕಚೇರಿಯನ್ನು ಸುಮಾರು 1.15 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಯಿತ್ತು. ಮಾ.12ರಂದು ಬೆಳಗೆ ಗಂಟೆ 10.30ಕ್ಕೆ ಉದ್ಘಾಟನ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ತಿಳಿಸಿದರು.
ಅವರು ಬುಧವಾರ ವಿಟ್ಲ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ವಿಟ್ಲ ಪಡ್ನೂರು ಗ್ರಾಂ.ಪಂ. ಅಧ್ಯಕ್ಷೆ ರೇಶ್ಮಾ ಶಂಕರಿ ಬಲಿಪಗುಳಿ, ಕೊಳ್ನಡು ಗ್ರಾ.ಪಂ.ಅಧ್ಯಕ್ಷ ನೆಬಿಸಾ, ಸಾಲೆತ್ತೂರು ಗ್ರಾ. ಪಂ.ಅಧ್ಯಕ್ಷ ಹುಸೈನಾರ್, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸಹಾಯಕ ನಿಬಂಧಕ ಸುಕುಮಾರ್ ಕುಮಾರ್ ಜಿ., ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ್ ಎಸ್.ಜಿ. ಭಾಗವಹಿಸಲಿದ್ದಾರೆ, ಮತ್ತುಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಂ.ಬಾಲಕೃಷ್ಣ ರೈ ಮೂರ್ಜೆಬೆಟ್ಟು, ಕೆ.ಲಕ್ಷ್ಮಿನಾರಾಯಣ ಅಡ್ಯಾಂತಾಯ ಕುದ್ರಿ, ಮಾಜಿ ಉಪಾಧ್ಯಕ್ಷ ಎಂ.ಗೋಪಾಲಕೃಷ್ಣ ಭಟ್ ಮಾದಕಟ್ಟೆ, ಮಮತಾ ಜಿ. ರೈ ಕುಳಾಲು, ನಿವೃತ್ತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ. ಶ್ರೀಪತಿ ಭಟ್ ಕುಂಟುಕುಡೇಲು ಅವರನು ಸಮ್ಮಾನಿಸಲಾಗುವುದು ಎಂದು ತಿಳಿಸಿದರು.
ವಿಟ್ಲ ಪಡ್ನೂರು, ಕೊಳ್ನಾಡು, ಸಾಲೆತ್ತೂರು ಗ್ರಾಮಗಳ ವ್ಯಾಪ್ತಿಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಈ ಸಂಘವು ಕಟ್ಟಡ ಕ್ಷೇಮನಿಧಿಯಲ್ಲಿ ಈ ಕಟ್ಟಡ ನಿರ್ಮಿಸಿದೆ. ವಿಸ್ತೃತ ಕಟ್ಟಡದ ಪ್ರಥಮ ಮಹಡಿಯಲ್ಲಿ ಕೇಂದ್ರ ಕಚೇರಿ, ಅಧ್ಯಕ್ಷರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಠಡಿ, ಸಭಾಂಗಣ, ಭದ್ರತಾ ಕೋಶ ಇತ್ಯಾದಿ ನಿರ್ಮಿಸಲಾಗಿದೆ. ಪ್ರಸ್ತುತ ಕಾರ್ಯಾಚರಿಸುತ್ತಿರುವ ಕಚೇರಿ ಕಟ್ಟಡವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುವುದು.ಕೊಳ್ಳಾಡು, ಕುಡ್ತಮುಗೇರು ಮತ್ತು ಕೋಡಪದವು ಎಂಬಲ್ಲಿ ಸಂಘದ ಶಾಖೆಗಳಿವೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಸತತವಾಗಿ ಅತ್ಯುತ್ತಮ ಸಂಘ ಎಂಬ ಪ್ರೋತ್ಸಾಹಕ ಪ್ರಶಸ್ತಿಗೆ ಪಾತ್ರವಾಗಿದೆ. ಗೊಬ್ಬರ ಮಾರಾಟದಲ್ಲಿ ಪ್ರಥಮ ಎಂಬ ಪ್ರಶಸ್ತಿಯೂ ಲಭಿಸಿದೆ. ಸಂಘವು 21-22ನೇ ಸಾಲಿನಲ್ಲಿ 271.22 ಕೋಟಿ ರೂ.ವ್ಯವಹಾರ ನಡೆಸಿದ್ದು, ಸದಸ್ಯರಿಗೆ 50.08 ಕೋಟಿ ರೂ ಸಾಲ ನೀಡಿದ.38.57 ಲಕ್ಷ ರೂ.ಠೇವಣಾತಿ ಇದೆ. ಸಂಘ ಸತತವಾಗಿ ಲಾಭಗಳಿಸಿದ್ದು, ಕಳೆದ ಹನ್ನೆರಡು ವರ್ಷಗಳಿಂದ ಸದಸ್ಯರಿಗೆ ಲಾಭಾಂಶ ವಿತರಿಸುತ್ತ ಬಂದಿದೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ.ಬಾಲಕೃಷ್ಣ ರೈ ಮೂರ್ಜೆಬೆಟ್ಟು, ಮುಖ್ಯ ಕಾರ್ಯನಿರ್ವಹಣಾಕಾರಿ ಲಕ್ಷ್ಮೀಶ ರೈ ನಿರ್ದೇಶಕರಾದ ರಮೇಶ್ಚಂದ್ರ ಪಿ., ಸಂದೇಶ್ ಶೆಟ್ಟಿ, ಬಿಕ್ಕಾಜೆ ಉಪಸ್ತಿತರಿದ್ದರು.