Tuesday, May 7, 2024
spot_imgspot_img
spot_imgspot_img

ಮುಂದಿನ ಬಾರಿ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ ಶಕುಂತಳಾ ಶೆಟ್ಟಿ; ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ 2018 ರಲ್ಲಿನ ಪೋಸ್ಟ್

- Advertisement -G L Acharya panikkar
- Advertisement -

ಪುತ್ತೂರು: ಮುಂದಿನ ಬಾರಿಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಹೊಸ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಲಾಗುವುದು. ತಾನು ಸ್ಪರ್ಧಿಸುವುದಿಲ್ಲ ಎಂದು 2018ರಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಘೋಷಿಸಿದ್ದಾರೆ. ಇದೀಗ ಬಾರಿ ವೈರಲ್ ಆಗುತ್ತಿದೆ.

ಪುತ್ತೂರು ಖಾಸಗಿ ಬಸ್ ನಿಲ್ದಾಣ ಸಮೀಪದ ಕಾಂಗ್ರೆಸ್ ಕಚೇರಿಯಲ್ಲಿ 2018ರಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ. ಇದುವರೆಗೆ ನಾಲ್ಕು ಸಲ ಸೋತಿದ್ದೇನೆ. ಈ ಸೋಲಿನಿಂದ ಕಂಗೆಟ್ಟಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ. ಸದ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಸುತ್ತೇನೆ ಎಂದರು. ಯಾರಿಗೂ ನೋವು ಕೊಡಬೇಡಿ, ಅಕ್ರಮಗಳಲ್ಲಿ ಭಾಗಿಯಾಗಬೇಡಿ ಎಂದು ಕಾರ್ಯಕರ್ತರಿಗೆ ಕಿವಿಮಾತನ್ನೂ ಹೇಳಿದರು.

ಬೆದ್ರಾಳ ಬಳಿ ಶಕುಂತಳಾ ಶೆಟ್ಟಿ ಜಾಗ ಮಾಡಿದ್ದಾರೆ ಎಂಬ ರಾಜೇಶ್ ಬೆದ್ರಾಳ ಆರೋಪಕ್ಕೆ ಪ್ರತಿಕ್ರಿಯಿಸಿದ ಶೆಟ್ಟಿ, ಅವರು ತೋರಿಸಿದರೆ, ಆ ಜಾಗವನ್ನು ಅವರಿಗೇ ಕೊಡುತ್ತೇನೆ ಎಂದು ಸವಾಲೆಸೆದರು.

- Advertisement -

Related news

error: Content is protected !!