Friday, June 27, 2025
spot_imgspot_img
spot_imgspot_img

ಮುಡಿಪು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರು ಆರೋಪಿಗಳು ಅಂದರ್

- Advertisement -
- Advertisement -

ಮುಡಿಪು: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಸಂಸ್ಕರಿಸಿದ ಗಾಂಜಾ ಹೊಂದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳದ ರಮೀಜ್ ರಾಜಾ ಮತ್ತು ಮಂಜೇಶ್ವರದ ಅಬ್ದುಲ್ ಹಾರಿಸ್ ಖಾದರ್ ಬಂಧಿತರು. ಇಬ್ಬರೂ ಕೇರಳ ನೋಂದಣಿಯ ಎಸ್‌ಯುವಿ ಕಾರಿನಲ್ಲಿ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದಿದ್ದರು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು ಕಾಯಕೋಡಿ ಎಂಬಲ್ಲಿ ಪೊಲೀಸರು ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಗಳು ಬಳಕೆಗೆ ಸಿದ್ದವಾಗಿದ್ದ ಗಾಂಜಾವನ್ನು ಮಾದಕವಸ್ತು ವ್ಯಾಪಾರಿಗಳಿಗೆ ವಿತರಿಸಲು ಕೊಂಡೊಯ್ಯುತ್ತಿದ್ದರು. ಕೇರಳ, ಮಣಿಪಾಲ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳ ವ್ಯಾಪಾರಿಗಳಿಗೆ ನೀಡಲೆಂದು ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಬಂಧಿತ ಆರೋಪಿಗಳ ಪೈಕಿ ರಮೀಜ್ ರಾಜಾ ವಿರುದ್ದ ಕೊಣಾಜೆ, ಉಳ್ಳಾಲ ಮತ್ತು ಮಂಗಳೂರು ಉತ್ತರ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಮಾದಕ ದ್ರವ್ಯ ದಂಧೆ ಸೇರಿದಂತೆ ಏಳು ಪ್ರಕರಣಗಳಿವೆ. ಅಬ್ದುಲ್ ಖಾದರ್ ವಿರುದ್ದ ಉಳ್ಳಾಲ, ಕಾಸರಗೋಡು, ಮಂಜೇಶ್ವರದಲ್ಲಿ ಕೊಲೆ ಯತ್ನ, ಹಲ್ಲೆ, ಮಾದಕದ್ರವ್ಯ ದಂಧೆ ಸೇರಿದಂತೆ ನಾಲ್ಕು ಪ್ರಕರಣಗಳಿವೆ.

ಆರೋಪಿಗಳ ಹಿಂದೆ ಮೂರು ನಾಲ್ಕು ಬಾರಿ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ಕಾರು, ಮೀನು ಕ್ಯಾರಿಯರ್, ಟ್ರಕ್ ಮುಂತಾದ ವಾಹನಗಳಲ್ಲಿ ತಂದಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಕಾರು, ಗಾಂಜಾ, ಶಸ್ತ್ರಾಸ್ತ್ರಗಳು, ಮೊಬೈಲ್ ಮತ್ತು ನಗದನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನು ಇದೊಂದು ದೊಡ್ಡ ಜಾಲವಾಗಿದ್ದು, ಹಲವು ಜನರು ಸೇರಿಕೊಳ್ಳುತ್ತಿದ್ದಾರೆ. ಅಲ್ಲದೆ ಹೆಚ್ಚಿನ ಬೇಡಿಕೆಯಿದ್ದಾಗ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದ್ದು, ಹೆಚ್ಚಿನ ತನಿಖೆಯನ್ನು ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!