Tuesday, May 14, 2024
spot_imgspot_img
spot_imgspot_img

ಮುರುಘಾ ಮಠದಲ್ಲಿನ ಅಕ್ರಮಗಳು ಒಂದೊಂದೇ ಬಯಲು..! ಅಂಧ ವ್ಯಕ್ತಿಯಿಂದ ತಿಳಿಯಿತು ಮತ್ತೊಂದು ಆಘಾತಕಾರಿ ಸುದ್ದಿ..! ಆರು ತಿಂಗಳಿನಿಂದ ಬಾಲಕಿ ನಾಪತ್ತೆ..?!

- Advertisement -G L Acharya panikkar
- Advertisement -

ಕರುನಾಡಿದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಮುರುಘಾ ಮಠದಲ್ಲಿ ಸ್ವತಃ ಸ್ವಾಮೀಜಿಗಳೇ ಹೇಯ ಕೃತ್ಯಕ್ಕೆ ಕೈ ಹಾಕಿರುವುದು ರಾಜ್ಯ ಮಾತ್ರವಲ್ಲದೆ ದೇಶವನ್ನೇ ದಂಗಾಗಿಸಿದೆ. ಸ್ವಾಮೀಜಿಗಳ ಮೇಲೆ ಬಂದ ಆರೋಪದ ಮೇಲೆ ಪೊಲೀಸರು ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಒಂದೊಂದೇ ಪ್ರಕರಣಗಳು ಅಲ್ಲಿ ನಡೆಯುವ ಕೃತ್ಯಗಳ ಬಗ್ಗೆ ಮಾಹಿತಿ ಸಿಗುತ್ತಿದೆ.

ಸ್ವಾಮೀಜಿ ಹೇಗೆ ತನ್ನ ಕಾಮಾದಾಟಕ್ಕೆ ವಿದ್ಯಾರ್ಥಿಗಳನ್ನು ಹೇಗೆಲ್ಲಾ ಬಳಸಿಕೊಂಡಿದ್ದರು ಎಂಬುವುದು ಬೆಳಕಿಗೆ ಬರುತ್ತಿದೆ. ಈಗ ಮತ್ತೊಂದು ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ. ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ನನ್ನ ಮಗಳು ಆರು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಅಂಧ ವ್ಯಕ್ತಿಯೋರ್ವರು ಹೇಳಿದ್ದಾರೆ.

ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್‌ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದ್ದಾರೆ.

ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ..!
ಇದಲ್ಲದೆ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಸಮನ್ಸ್ ಜಾರಿ ಮಾಡಿದರೂ ಮುರುಘಾ ಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

- Advertisement -

Related news

error: Content is protected !!