Monday, April 29, 2024
spot_imgspot_img
spot_imgspot_img

ಮುಸ್ಲಿಂ ದಂಪತಿಯಿಂದ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ.!

- Advertisement -G L Acharya panikkar
- Advertisement -
astr

ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನೈನ ಉದ್ಯಮಿ ಅಬ್ದುಲ್ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ 1.02 ಕೋಟಿ ದೇಣಿಗೆ ನೀಡಿದ್ದಾರೆ.

ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗ್ರಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು 287 ಲಕ್ಷ ಹಾಗೂ ಎಸ್.ವಿ.ಅನ್ನಪ್ರಸಾದಂ ಟ್ರಸ್ಟ್‌ ಗೆ 15 ಲಕ್ಷ ಒದಗಿಸಿದರು.

ಅಬ್ದುಲ್ ಘನಿ ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ.2020 ರಲ್ಲಿ ಅವರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಟೈಯರ್ ಅನ್ನು ದೇಣಿಗೆ ನೀಡಿದ್ದರು. ಇದಕ್ಕೂ ಮೊದಲು ದೇವಸ್ಥಾನಕ್ಕೆ ತರಕಾರಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು.

- Advertisement -

Related news

error: Content is protected !!